ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಕೊಲೆ ಕೇಸ್: ಕೊನೆಗೂ ಆರೋಪಿ ಅರೆಸ್ಟ್

Date:

ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ವಿಶ್ವ ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿಶ್ವ ವೃತಿಯಲ್ಲಿ ಕಳ್ಳ ಎನ್ನಲಾಗಿದ್ದು, ಪ್ರವೃತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಮದ್ಯವ್ಯಸನಿ ಚಟಕ್ಕೆ ಬಲಿಯಾಗಿ ಕಳ್ಳತನ ಮಾಡಿ ಹಲವು ಸಲ ಸಿಕ್ಕಿ ಹಾಕಿಕೊಂಡಿದ್ದ. ಹಂತಕನ‌ ಪತ್ತೆಗೆ ಎರಡು ಪೊಲೀಸ್ ಟೀಮ್ ರಚನೆ ಮಾಡಿದ್ದು, ಒಂದು ತಂಡ ಮೈಸೂರು ಹಾಗೂ ಮತ್ತೊಂದು ತಂಡ ದಾವಣಗೆರೆಯಲ್ಲಿ ಹುಡುಕಾಟ ನಡೆಸುತ್ತಿತ್ತು.
ಹತ್ಯೆ ಸ್ಥಳದ ಅಕ್ಕಪಕ್ಕದಲ್ಲಿನ ಮತ್ತು ಬಸ್ ನಿಲ್ದಾಣದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ವಿಶ್ವನ ಬಂಧನಕ್ಕೆ ಬಲೆ ಬೀಸಲಾಗಿತ್ತು. ಸದ್ಯ ನಿನ್ನೆ ರಾತ್ರಿ ದಾವಣಗೆರೆಯಲ್ಲಿ ಅರೆಸ್ಟ್ ಆಗಿದ್ದಾನೆ. ಆರೋಪಿಯ ಬಳಿ ಯಾವುದೇ ಮೊಬೈಲ್ ಇರಲಿಲ್ಲ, ಕಳೆದ ಹದಿನೈದು ದಿನಗಳಿಂದ ವಿಶ್ವ ಅಲಿಯಾಸ್ ಗಿರೀಶ್ ಮೊಬೈಲ್ ಬಳಕೆ‌ ಮಾಡಿಲ್ಲ. ಹೀಗಾಗಿ ಹಂತಕನನ್ನು ಹುಡುಕುವುದು ಪೊಲೀಸರಿಗೆ ಕಷ್ಟವಾಗಿತ್ತು.
ಆರೋಪಿ ವಿಶ್ವ ಸ್ನೇಹಿತರ ಜೊತೆಗೆ ಬೈಕ್ ಕಳ್ಳತನ ಮಾಡುತ್ತಿದ್ದ. ಅಲ್ಲದೆ ಅಮಾಯಕ ಯುವತಿಯರನ್ನು ಟಾರ್ಗೆಟ್ ಮಾಡಿ, ಅವರ ಜೊತೆ ಪ್ರೀತಿ ನಾಟಕವಾಡಿ, ಬಳಿಕ ಅವರನ್ನು ಬಳಸಿಕೊಂಡು, ಯುವತಿರಿಂದ ಬಂಗಾರ, ಬೆಳ್ಳಿ, ಹಣ ಪಡೆದುಕೊಂಡು ಮೋಸ ಮಾಡಿರುವ ಪ್ರಕರಣಗಳು ಸಹ ಹೊರಬಂದಿವೆ. ಇನ್ನೂ ಅಂಜಲಿಗೆ ಇದೇ ರೀತಿ ಮಾಡುವ ಪ್ರಯತ್ನ ಮಾಡಿದ್ದಾನೆ. ಇದಕ್ಕೆ ಅಂಜಲಿ ಒಪ್ಪದಿದ್ದಾಗ, ಹತ್ಯೆ ಮಾಡಿ ಪೈಶಾಚಿಕತೆ ಮರೆದಿದ್ದಾನೆ. ಇನ್ನೂ ವಿಶ್ವನ ಅಪರಾಧ ಹಿನ್ನೆಲೆ ಬಗ್ಗೆ ಬೆಂಡಿಗೇರಿ ಪೋಲಿಸರಿಗೆ ಮೊದಲೇ ಗೊತ್ತಿತ್ತು. ಹೀಗಿದ್ದರೂ ಅಂಜಲಿ ಪ್ರಕರಣದಲ್ಲಿ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವುದು ಈಗ ಹಲವಾರು ಅನುಮಾನ ಹುಟ್ಟುಹಾಕುತ್ತಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...