ಪತ್ರ ಬರೆದ ತಕ್ಷಣ ಪಾಸ್‌ʼಪೋರ್ಟ್‌ ರದ್ದು ಆಗಬೇಕು ಅಂತಲ್ಲ: ಪ್ರಹ್ಲಾದ್ ಜೋಶಿ

Date:

ಕಲಬುರಗಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಅವರು ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ನಗರದಲ್ಲಿ ಮಾತನಾಡಿದ ಅವರು, ಡಿಪ್ಲೋಮ್ಯಾಟ್ ಪಾಸ್‌ಪೋರ್ಟ್ ರದ್ದತಿಗೆ ನ್ಯಾಯಾಲಯದಲ್ಲಿ ಕೇಸ್ ಫೈಲ್ ಮಾಡಲಾಗಿದೆ. ಹೊರದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರೊಸೆಸ್ ಇದೆ. ಭಾರತ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ತಯಾರಿದೆ. ಇವರು ಪತ್ರ ಬರೆದ ತಕ್ಷಣ ಪಾಸ್‌ಪೋರ್ಟ್‌ ರದ್ದು ಆಗಬೇಕು ಅಂತಲ್ಲ, ಇದನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಇನ್ನೂ ನಾನು ಕೇಳುವ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಅವರಿಗೆ ಇದುವರೆಗೂ ಉತ್ತರ ಕೊಡಲು ಆಗುತ್ತಿಲ್ಲ. ಒಕ್ಕಲಿಗ ಸಮುದಾಯದ ಓಟ್ ಮೇಲೆ ಕಣ್ಣಿಟ್ಟು ಅಲ್ಲಿ ಚುನಾವಣೆ ಮುಗಿಯುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.ಇದು ಅತ್ಯಂತ ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...