No menu items!
9.3 C
Munich
Wednesday, April 29, 2026

ಪೂಜೆ ವಿಚಾರಕ್ಕೆ ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ !

Must read

ಪೂಜೆ ವಿಚಾರಕ್ಕೆ ಪೂಜಾರಿಗಳಿಂದ ತ್ರಿಶೂಲ ಹಿಡಿದು ಬಡಿದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಚಿಕ್ಕಲ್ಲೂರು ದೇವಾಲಯದಲ್ಲಿ
ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ.

ಗಾಯಾಳುಗಳನ್ನು ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ (65), ಶಿವಕುಮಾರ ಸ್ವಾಮಿ (40) ಹಾಗೂ ನಂಜುಂಡ ಸ್ವಾಮಿ (32) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುತ್ತಿತ್ತು. ಈ ಸಮಯದಲ್ಲಿ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ ಎಂದು ತಡೆ ಒಡ್ಡಿದ್ದಾರೆ. ಹೀಗಾಗಿ ನಂಜುಂಡಸ್ವಾಮಿ ಮತ್ತು ಶಂಕರಪ್ಪನ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article