ಹಾಸನ: ಬಹು ಯಶಸ್ವಿಯೊಂದಿಗೆ 18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಭಾರಿ ಸದ್ದು ಮಾಡಿದ ಕರ್ನಾಟಕದ ಕ್ಷೇತ್ರಗಳೆಂದರೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ.
ಅದರಲ್ಲೂ ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಾಗೂ ಪೆನ್ಡ್ರೈವ್ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಇದೀಗ ಹೆಚ್ಚಾಗಿದೆ.
ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಹಿನ್ನಡೆ ಇದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯ ಹೊರತು ಇದೀಗ ಹೊರಬೀಳುತ್ತಿರುವ ಫಲಿತಾಂಶ ನೋಡಿದ್ರೆ ಮತದಾರರು ಅಚ್ಚರಿ ಮೂಡಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಮುನ್ನಡೆ..!
Date: