ಬೆಂಗಳೂರಿನ ಕೋರ್ಟ್‍ನಲ್ಲಿ ಇಂದು ರಾಹುಲ್ ಗಾಂಧಿ ವಿಚಾರಣೆ!

Date:

ಬೆಂಗಳೂರು: ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್‍ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಎದುರಿಸಲಿದ್ದಾರೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು
ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೋರ್ಟ್ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿಯವರು ಗೈರಾಗಿದ್ದರು.
ವಿಚಾರಣೆಯ ಸಂದರ್ಭದಲ್ಲಿ ಗಾಂಧಿ ಪರ ವಕೀಲರು ಐ.ಎನ್.ಡಿ.ಐ.ಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿರುವುದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆಯನ್ನು ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತ್ತು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...