ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಗುಡ್‌ ನ್ಯೂಸ್‌.!

Date:

ಬೆಂಗಳೂರು: ರಾಜ್ಯ ಸರ್ಕಾರದಿಂದ ತೃತೀಯ ಲಿಂಗಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ ನೀಡಲು ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್ಗೆ ಎರಡು ಸಾವಿರ ರೂಪಾಯಿ ಹಣ ಬರಲಿದೆ.
ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.25 ಕೋಟಿ ಮಂದಿ 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿ ದಾರರಾಗಿದ್ದು ಅವರಿಗೆ ಹಣ ಸಂದಾಯ ಸ್ಥಗಿತ ಮಾಡಲಾಗಿದೆ. ಜೊತೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು‌ ಜೂನ್ ತಿಂಗಳ ಹಣ ವರ್ವಗಾವಣೆಯಾಗಬೇಕಿದೆ.
ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ ನೀಡುವ ಬಗ್ಗೆ ತೃತೀಯ ಲಿಂಗಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನ ಮಂಗಳಮುಖಿಯರು ಕಷ್ಟದಲ್ಲಿದ್ದಾರೆ. ಅಂತಹವರಿಗೆ ಈ ಹಣ ಸಾಕಷ್ಟು ಅನುಕೂಲವಾಗಲಿದೆ. ಐದು ಸ್ಕೀಮ್ ಪೈಕಿ ಶಕ್ತಿ ಯೋಜನೆ ನಮ್ಮ ಕೈ ಸೇರಿತ್ತು. ಆದ್ರೆ ಗೃಹಲಕ್ಷ್ಮಿ ಹಣ ಸಿಕ್ಕಿರಲಿಲ್ಲ. ಇದೀಗ ಎಲ್ಲ ಮಹಿಳೆಯರಂತೆ ನಮಗೂ ಈ ಹಣ ಸಿಗಲಿದೆ ಎಂದು ಸರ್ಕಾರಕ್ಕೆ ದನ್ಯವಾದ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...