No menu items!
4.8 C
Munich
Saturday, May 2, 2026

ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ !

Must read

ಬೆಂಗಳೂರು: ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ 15 ದಿನದಿಂದ ಕೆಆರ್ಎಸ್ನಿಂದ ವಿಸಿ ನಾಲೆಗೆ ನೀರು ಬಿಡಬೇಕು ಎಂಬ ಒತ್ತಡ ಇತ್ತು. ಈಗ ಅಲ್ಲಿ ನೀರು ಹೆಚ್ಚಾಗಿದೆ. ಮಾರ್ಚ್, ಏಪ್ರಿಲ್, ಮೇನಲ್ಲಿ ನೀರು ಬಿಡದಿರೋದ್ರಿಂದ ಜಾನುವಾರು ಹಾಗೂ ಪಕ್ಷಿಗಳಿಗೆ ಸಮಸ್ಯೆ ಆಗಿತ್ತು. ಹೀಗಾಗಿ ನೀರು ಬಿಡಬೇಕು ಎಂದು ಒತ್ತಾಯ ಬಂದಿತ್ತು. ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ ಎಂದು ಹೇಳಿದರು.
ನೀರು ಬಿಡಬೇಕು ಎಂದು ಅಲ್ಲಿನ ಶಾಸಕರು ಒತ್ತಾಯ ಮಾಡಿದ್ದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗಾಗಿ ಮಾತ್ರ ನೀರು ಬಿಡುತ್ತೇವೆ. ಕೃಷಿಗೆ ಸದ್ಯಕ್ಕೆ ನೀರು ಹರಿಸೋದಿಲ್ಲ. ಸದ್ಯಕ್ಕೆ ಅಂದುಕೊಂಡಷ್ಟು ಮಳೆಯಾಗಿಲ್ಲ. ಜುಲೈ ಅಂತ್ಯಕ್ಕೆ ಪೂರ್ಣ ಪ್ರಮಾಣದ ಕ್ಲಾರಿಟಿ ಸಿಗುತ್ತೆ. ನಿತ್ಯ 3,000 ಕ್ಯೂಸೆಕ್ ನೀರು ಬಿಡುವ ಚಿಂತನೆ ಇದೆ ಎಂದರು.

- Advertisement -spot_img

More articles

- Advertisement -spot_img

Latest article