No menu items!
4.8 C
Munich
Saturday, May 2, 2026

ವಾಲ್ಮೀಕಿ ಅಕ್ರಮ ಪ್ರಕರಣ: ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

Must read

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.
ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ. ರಾಮ್ ರಹೀಮ್ ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article