ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು: ಸಿ.ಟಿ.ರವಿ

Date:

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯನವರು ಹೇಳುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತಿಂದವರೂ ಆ ಹಣ ಕಕ್ಕಬೇಕು. ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕು. ಅಹಿಂದ ರಾಜಕಾರಣ ಮಾಡಿದ ಸಿದ್ದರಾಮಯ್ಯನವರು ದಲಿತರ ಹಣ ತಿಂದು ನೀರು ಕುಡಿದವರನ್ನು ಹೇಗೆ ಸಹಿಸಿಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಯಾರ್ಯಾರು ಹಗರಣ ಮಾಡಿದ್ದಾರೆ, ತಪ್ಪು ಮಾಡಿದ್ದಾರೆ, ಅವರೆಲ್ಲರ ಬಗ್ಗೆಯೂ ತನಿಖೆಯಾಗಿ ಶಿಕ್ಷೆಯಾಗಲಿ. ಯಾವ ಇಲಾಖೆಯ ಹಗರಣಗಳು ಏನಾಗಿವೆ ಗೊತ್ತಿಲ್ಲ. ರಾಜ್ಯದ ಖಜಾನೆಗೆ ಕನ್ನ ಹಾಕುವ ಹೆಗ್ಗಣಗಳು ಎಲ್ಲ ಕಡೆ ತುಂಬಿವೆ. ಎಷ್ಟೇ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸಿದರೂ ಕೂಡ ಹೆಗ್ಗಣಗಳು ಖಜಾನೆ ಖಾಲಿ ಮಾಡುತ್ತಿದ್ದರೆ, ಅದು ಹೇಗೆ ತುಂಬುತ್ತೆ?. ಅಂತಹ ಹೆಗ್ಗಣಗಳನ್ನು ನಿಯಂತ್ರಿಸದೆ ಇದ್ರೆ, ನಮ್ಮ ರಾಜ್ಯದ ಖಜಾನೆ ಉಳಿಯಲ್ಲ. ಜನರ ಮೇಲೆ ತೆರಿಗೆ ಭಾರ ಮಾತ್ರವಾಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...