No menu items!
17 C
Munich
Saturday, May 2, 2026

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ !

Must read

ಬೆಂಗಳೂರು: ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ.
ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು.
ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.
ಮುಖ್ಯಮಂತ್ರಿ ಹುದ್ದೆಗೆ ₹2500 ಕೋಟಿ, ಮಂತ್ರಿ ಸ್ಥಾನಕ್ಕೆ ₹100 ಕೋಟಿ ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.
ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article