ಒಡೆದ ಹಿಮ್ಮಡಿ ಸರಿಪಡಿಸಲು ಇಲ್ಲಿದೆ ನೋಡಿ ಮನೆಮದ್ದು

Date:

ಸೌಂದರ್ಯದ ಕಾಳಜಿಯ ವಿಚಾರಕ್ಕೆ ಬಂದರೆ ನಾವು ನಮ್ಮ ನೆರಳಿನಲ್ಲೇ ನಿರ್ಲಕ್ಷಿಸುತ್ತೇವೆ. ಎಷ್ಟೇ ಸ್ಮಾರ್ಟ್ ಆಗಿ ಡ್ರೆಸ್ ಮಾಡಿದರೂ ಒಡೆದ ಹಿಮ್ಮಡಿ ನಿಮ್ಮ ಲುಕ್ ಅನ್ನು ಹಾಳು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಗೆ ಮನೆಯಲ್ಲೇ ಪರಿಹಾರವಿದೆ.ಮತ್ತೊಂದೆಡೆ, ಒಣ ಪಾದಗಳನ್ನು ಹೊಂದಿರುವ ಜನರು ಈ ಸಮಸ್ಯೆಗೆ ಹೆಚ್ಚು ಒಳಗಾಗುತ್ತಾರೆ. ಏಕೆಂದರೆ ಅವರ ಹಿಮ್ಮಡಿಗಳು ವೇಗವಾಗಿ ಬಿರುಕು ಬಿಡುತ್ತವೆ. ಇದರಿಂದ ನೋವು ಮತ್ತು ಕಿರಿಕಿರಿ ಉಂಟಾಗಬಹುದು. ಇದಕ್ಕೆ ನಿಮ್ಮ ಅಡುಗೆ ಮನೆಯಲ್ಲಿಯೇ ಪರಿಹಾರ ಇದೆ.

ಅಡುಗೆ ಮನೆಯಲ್ಲಿರುವ ಈ ವಸ್ತುಗಳನ್ನೇ ಮನೆ ಮದ್ದಾಗಿ ಬಳಸಿ*

ಬಾಳೆಹಣ್ಣುಗಳು ಒಣ ತ್ವಚೆಗೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕೆಲಸ ಮಾಡುತ್ತವೆ. ಬಾಳೆಹಣ್ಣಿನಲ್ಲಿ ವಿಟಮಿನ್ ಎ, ಬಿ6 ಮತ್ತು ಸಿಗಳು ಹೇರಳವಾಗಿದೆ. ಬಾಳೆಹಣ್ಣನ್ನು ಕಿವುಚಿ ಒಡೆದ ಚರ್ಮದ ಮೇಲೆ ಲೇಪಿಸುವುದರಿಂದ ಚರ್ಮವನ್ನು ತೇವಾಂಶಭರಿತವಾಗಿರಿಸುತ್ತದೆ.
*ಜೇನುತುಪ್ಪವು ನೈಸರ್ಗಿಕ ನಂಜುನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಜೇನುತುಪ್ಪವು ಒಡೆದ ಪಾದಗಳಿಗೆ ಹಚ್ಚುವುದರಿಂದ ಮಾಯಿಶ್ಚರೈಸರ್ ಆಗಿಯೂ ಕಾರ್ಯನಿರ್ವಹಿಸುವುದಲ್ಲದೆ, ಪಾದಗಳ ಚರ್ಮದಲ್ಲಿನ ಶುಷ್ಕತೆಯನ್ನು ನಿವಾರಿಸುತ್ತದೆ.
ಒಣ ಚರ್ಮಕ್ಕೆ ತೆಂಗಿನ ಎಣ್ಣೆಯನ್ನು ಹೆಚ್ಚಾಗಿ ಶಿಫಾರಸು ಮಾಡಲಾಗುತ್ತದೆ. ಇದು ನಿಮ್ಮ ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕಾಲನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಅರ್ಧ ಗಂಟೆ ಇಟ್ಟು ಬಳಿಕ ಒಡೆದ ಹಿಮ್ಮಡಿಗಳಿಗೆ ತೆಂಗಿನ ಎಣ್ಣೆಯನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.
ವ್ಯಾಸಲಿನ್ ಮಾಯ್ಚುರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ನಿಂಬೆ ರಸವು ಚರ್ಮದ ಕೋಶಗಳ ಪುನಃ ಬೆಳವಣಿಗೆಗೆ ಉತ್ತೇಜನ ನೀಡುತ್ತದೆ ಹಾಗಾಗಿ ಇವೆರಡರ ಮಿಶ್ರಣ ತುಂಬಾ ಒಳ್ಳೆಯದು. ಮೊದಲು ಬೆಚ್ಚಗಿನ ನೀರಿನಲ್ಲಿ ನಿಮ್ಮ ಪಾದವನ್ನು 20 ನಿಮಿಷಗಳ ಕಾಲ ಇಟ್ಟುಕೊಳ್ಳಿ. ನಂತರ ಒಣಗಿದ ಬಟ್ಟೆಯಲ್ಲಿ ಒರೆಸಿ. 3- 4 ಹನಿಯಷ್ಟು ನಿಂಬೆ ರಸಕ್ಕೆ 1 ಟೀ ಚಮಚ ವ್ಯಾಸಲೀನ್ ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ ಪಾದ ಹಾಗೂ ಹಿಮ್ಮಡಿಯ ಜಾಗಕ್ಕೆ ಹಚ್ಚಿಕೊಳ್ಳಿ, ಮುಂಜಾನೆ ಬೆಚ್ಚಗಿನ ನೀರಿನಲ್ಲಿ ಸ್ವಚ್ಛಗೊಳಿಸಿ.ಈ ರೀತಿ ಮಾಡುವುದರಿಂದ ಒಡೆದ ಹಿಮ್ಮಡಿ ನೋವಿನಿಂದ ಪರಿಹಾರ ಸಿಗುತ್ತದೆ.
ಒಡೆದ ಪಾದಗಳ ಆರೈಕೆಗೆ ಒಂದು ಚಮಚ ಅಡಿಗೆ ಸೋಡಾವನ್ನು ನೀರಿನೊಂದಿಗೆ ಮಿಶ್ರಣ ಮಾಡಿ 15 ನಿಮಿಷಗಳ ಕಾಲ ಪಾದಗಳನ್ನು ನೀರಿನಲ್ಲಿ ಇಡುವುದರಿಂದ ಮೃದುವಾಗುತ್ತದೆ.
ಪೆಟ್ರೋಲಿಯಂ ಜೆಲ್ಲಿಗೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ ಮಿಶ್ರಣ ಮಾಡಿಟ್ಟುಕೊಳ್ಳಬೇಕು. ಸ್ವಚ್ಛಗೊಳಿಸಿದ ಪಾದಗಳಿಗೆ ಈ ಮಿಶ್ರಣವನ್ನು ಹಚ್ಚುವುದರಿಂದ ಒಡೆದ ಪಾದಗಳ ಸಮಸ್ಯೆಯೂ ನಿವಾರಣೆಯಾಗುತ್ತದೆ.

Share post:

Subscribe

spot_imgspot_img

Popular

More like this
Related

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..?

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..? ಮನೆಯ ದೈನಂದಿನ ಕೆಲಸಭಾರವನ್ನು ನಿರ್ವಹಿಸುವ...