ಬಾಕಿ ಬಿಲ್ ಪಾವತಿದಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ BWSSB

Date:

 

ಬೆಂಗಳೂರು: ಬ್ಯಾಡ್ ನ್ಯೂಸ್ ಭೀತಿಯಲ್ಲಿದ್ದ ಬೆಂಗಳೂರಿಗರಿಗೆ ಜಲಮಂಡಳಿ ಗುಡ್ ನ್ಯೂಸ್ ನೀಡೋಕೆ ಪ್ಲಾನ್ ಮಾಡಿಕೊಂಡಿದೆ. ಬಿಬಿಎಂಪಿಯ ಭರ್ಜರಿ ಆಫರ್ ನಂತರ ಇದೀಗ ಜಲಮಂಡಳಿ ಕೂಡ ಆಫರ್ ನೀಡೋಕೆ ರೆಡಿ ಆಗಿದೆ. ಬಾಕಿ ಬಿಲ್ ಪಾವತಿಗೆ ಬಿಬಿಎಂಪಿ ಅದೆಷ್ಟು ಸರ್ಕಸ್ ಮಾಡಿದ್ರು ವರ್ಕ್ ಔಟ್ ಆಗಿರಲಿಲ್ಲ. ಸಂಚಾರಿ ಪೊಲೀಸರು ದಂಡ ವಸೂಲಿಗಾಗಿ ಮಾಡಿದ್ದ ಒನ್ ಟೈಮ್ ಸೆಟಲ್‍ಮೆಂಟ್ ಯೋಜನೆಯನ್ನ ಫಾಲೊ ಮಾಡಿತು. ಇದೀಗ ಅದೇ ಪ್ಲಾನ್ ನ್ನು ಫಾಲೋ ಮಾಡೋಕೆ ಜಲಮಂಡಳಿ ಕೂಡ ರೆಡಿಯಾಗ್ತಿದೆ.
ನೀರಿನ ದರ ಏರಿಕೆ ಕೂಡ ಶೀಘ್ರದಲ್ಲೇ ಆಗಬಹುದು ಅನ್ನೋ ಚರ್ಚೆ ನಗರ ವಾಸಿಗಳನ್ನ ಆತಂಕಕ್ಕೆ ದೂಡಿತ್ತು. ಈ ಮಧ್ಯೆಯೂ ಜಲ ಮಂಡಳಿ ನಗರದ ಜನರಿಗೆ ಸಿಹಿ ಸುದ್ದಿ ನೀಡೋ ಪ್ಲ್ಯಾನ್ ಮಾಡ್ತಿದೆ‌. ಈ ಮೂಲಕ ನಗರದಲ್ಲಿ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವವರಿಗೆ ಆಫರ್ ಒಂದನ್ನ ನೀಡೋಕೆ ಜಲಮಂಡಳಿ ಮುಂದಾಗಿದ್ದು, ಕೋಟ್ಯಾಂತರ ರೂಪಾಯಿ ಬಾಕಿ ಹಣ ವಸೂಲಿ ಜೊತೆಗೆ, ಜನರ ಮೇಲಿನ ಸಾಲದ ಹೊರೆಯನ್ನು ಕೂಡ ತಗ್ಗಿಸೋಕೆ ಚಿಂತನೆ ನಡೆಸಿದೆ.
ಜಲಮಂಡಳಿ ವ್ಯಾಪ್ತಿಯಲ್ಲಿ ಸರ್ಕಾರಿ, ಖಾಸಗಿ, ಎಲ್ಲಾ ಸೇರಿ ಸುಮಾರು 600 ಕೋಟಿಗೂ ಅಧಿಕ ಬಾಕಿ ಬಿಲ್ ಪಾವತಿಯಾಗಬೇಕಿದೆ‌. ಈಗಾಗಲೇ ಬಿಲ್ ಬಾಕಿ ಇರುವವರಿಗೆ ಅನೇಕ ಬಾರಿ ಎಚ್ಚರಿಕೆ ನೀಡಿದ್ರು ಬಾಕಿ‌ಮಾತ್ರ ವಾಪಸ್ ಬರ್ತಿಲ್ಲ. ಇದೇ ಕಾರಣಕ್ಕೆ ೫೦% ಆಫರ್ ಅಥವಾ ದಂಡ, ಬಡ್ಡಿ ಇಲ್ಲದಂತೆ ಓನ್ ಟೈಂ ಸೆಟ್ಲಮೆಂಟ್ ಆಫರ್ ಕೊಡುವ ಯೋಜನೆಗಾಗಿ ಪ್ಲ್ಯಾನ್ ಸಿದ್ದಪಡಿಸುತ್ತಿದೆ.

Share post:

Subscribe

spot_imgspot_img

Popular

More like this
Related

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ ಸುಧಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್...

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...