ಸಿಎಂ ಸಿದ್ದರಾಮಯ್ಯಗೆ ಶಾಕ್: ಮತ್ತೊಂದು ದೂರು ದಾಖಲು!

Date:

 

ಬೆಂಗಳೂರು: ಮುಡಾ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಮತ್ತೆಮತ್ತೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು,
ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಕೆಸಿ ಉಮೇಶ್ ಎಂಬವರು ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ.
ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಎಕರೆ ಜಮೀನು ಸಂಬಂಧ ಪರಿತ್ಯಾಜನ ಪತ್ರ ನೋಂದಣಿ ಮಾಡಲಾಗಿದೆ. 25-11-2021ರಲ್ಲಿ ಅಕ್ರಮವಾಗಿ ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರ ನೋಂದಣಿ ಯಾಗಿದೆ. ಪಾರ್ವತಿಯವರು ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರ ಮಾಡಿಕೊಟ್ಟಿದ್ದಾರೆ. ಕೂಡಲೇ ಉಮೇಶ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...