ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತ ಕಲೆ ಪತ್ತೆ: A1 ಆರೋಪಿ ವಿರುದ್ಧ ಮತ್ತಷ್ಟು ಸಾಕ್ಷ್ಯ ಲಭ್ಯ!

Date:

 

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ. ಶೀಘ್ರದಲ್ಲೇ ಚಾರ್ಚ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 33 ಸಿಸಿಟಿವಿ ಕ್ಯಾಮರಾ ದೃಶ್ಯಗಳೇ ದರ್ಶನ್ ವಿರುದ್ಧ ಪ್ರಮುಖ ಸಾಕ್ಷಿಗಳಾಗಿವೆ.

ಇನ್ನೂ ಮತ್ತೊಂದೆಡೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾಗೌಡ ಚಪ್ಪಲಿಯಲ್ಲೂ ಮೃತ ವ್ಯಕ್ತಿಯ ರಕ್ತ ಕಲೆ ಪತ್ತೆಯಾಗಿದೆ.

ಹೀಗಾಗಿ ಆರೋಪಿ ಪವಿತ್ರಾಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.

ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ. ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ.

ಇನ್ನು, ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...