ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ: ಅಧಿಕಾರಿಗಳ ಯಡವಟ್ಟಿಗೆ ಕೋರ್ಟ್ ನೀಡಿದ ಆದೇಶ ಏನು ಗೊತ್ತಾ!?

Date:

 

ಬೆಳಗಾವಿ:- ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಅಧಿಕಾರಿಗಳ ಯಡವಟ್ಟಿಗೆ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ರಸ್ತೆ ಕಾಮಗಾರಿ, ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಮಹಾನಗರ ಪಾಲಿಕೆಗೆ ಭಾರೀ ನಷ್ಟವಾಗಿದ್ದು ಮಹಾ ಸಂಕಷ್ಟ ಎದುರಾಗಿದೆ. 20 ಕೋಟಿ ಪರಿಹಾರ ಮೊತ್ತ ಠೇವಣಿಗೆ ಧಾರವಾಡ ಹೈಕೋರ್ಟ್​ ಆದೇಶ ಹೊರಡಿಸಿದೆ.

2021ರಲ್ಲಿ ಬೆಳಗಾವಿಯ ಶಿವಾಜಿ ಗಾರ್ಡನ್​ನಿಂದ ಓಲ್ಡ್ ಪಿಬಿ ರಸ್ತೆವರೆಗೆ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ಈ ಕಾಮಗಾರಿ ನಡೆದಿತ್ತು. ಈ ವೇಳೆ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದರು. ಪರಿಹಾರ ನೀಡುವ ವಿಚಾರದಲ್ಲಿ ಅಂದಿನ ಪಾಲಿಕೆ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದರು. ಇದರಿಂದ ಭೂಮಿ ಕಳೆದುಕೊಂಡ ನಿವಾಸಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಇದೀಗ ಭೂಮಿ ಕಳೆದುಕೊಂಡವರಿಗೆ ಪರಿಹಾರಕ್ಕಾಗಿ ಠೇವಣಿ ಮೊತ್ತ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಇನ್ನು ಧಾರವಾಡ ಹೈಕೋರ್ಟ್ ಆದೇಶ ಹಿನ್ನೆಲೆ ಬೆಳಗಾವಿ ಮಹಾನಗರ ಪಾಲಿಕೆ ತುರ್ತು ಸಭೆ ಕರೆದಿದೆ. 20ಕೋಟಿ ಪರಿಹಾರ ಮೊತ್ತ ಠೇವಣಿ ಇಟ್ಟರೆ ಪಾಲಿಕೆಗೆ ತೀವ್ರ ಆರ್ಥಿಕ ಸಂಕಷ್ಟ ಎದುರಾಗಲಿದೆ. ದುಡ್ಡು ಹೇಗೆ ಹೊಂದಿಸಬೇಕೆಂಬುವುದೇ ಬೆಳಗಾವಿ ಮಹಾನಗರ ಪಾಲಿಕೆಗೆ ಸವಾಲಾಗಿದೆ. ಸದ್ಯ ಎಲ್ಲರ ಚಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯತ್ತ ಇದೆ. ಇದೇ 27ರಂದು ಪಾಲಿಕೆ ಪರಿಷತ್ ಹಾಲಿನಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಇದರ ಜೊತೆಗೆ ಇನ್ನೂ ಐದಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಂಗ ನಿಂದನೆ ತೂಗುಗತ್ತಿ ನೇತಾಡುತ್ತಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...