ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್: ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ಧ ದೂರು ದಾಖಲು
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಆರೋಪ ಮೇಲೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ದೂರು ದಾಖಲಾಗಿದೆ. ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಆರೋಪಿಸಿದ್ದಾರೆ. ಚಳುವಳಿ ಹಾಗೂ ಹೋರಾಟಗಳಲ್ಲಿ ಭಾಸ್ಕರ್ಗೆ 2 ವರ್ಷಗಳ ಹಿಂದೆ ಪವಿತ್ರಾ ಪರಿಚಯವಾಗಿತ್ತಂತೆ.
ಕಳೆದ ಆಗಸ್ಟ್ 8 ರಂದು ವಾಟ್ಸ್ಆ್ಯಪ್ನಲ್ಲಿ ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಿ ಅದರ ಫೋಟೋ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು 10 ಲಕ್ಷ ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಪವಿತ್ರಾ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ. ಹೀಗಾಗಿ ನೊಂದ ಭಾಸ್ಕರ್ ಪ್ರಸಾದ್ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.