ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ಸಚಿವ ಜೋಶಿ

Date:

ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ಸಚಿವ ಜೋಶಿ

ಹುಬ್ಬಳ್ಳಿ: ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ.
ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು.
ಇನ್ನೂ ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ರಾಜ್ಯ ಸರ್ಕಾರ ಅನ್ನ ಭಾಗ್ಯ ಘೋಷಣೆ ಮಾಡಿದ್ದಷ್ಟೇ. ಯಾವ ಭಾಗ್ಯವೂ ಇಲ್ಲ. ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...