No menu items!
28.4 C
Munich
Monday, May 25, 2026

ರಾಜ್ಯೋತ್ಸವಕ್ಕೆ ಬಂತು ಹೊಸ ರೂಲ್ಸ್‌: ಡಿಕೆ ಶಿವಕುಮಾರ್‌ ಹೇಳಿದ್ದೇನು..?

Must read

ರಾಜ್ಯೋತ್ಸವಕ್ಕೆ ಬಂತು ಹೊಸ ರೂಲ್ಸ್‌: ಡಿಕೆ ಶಿವಕುಮಾರ್‌ ಹೇಳಿದ್ದೇನು..?

ಬೆಂಗಳೂರು: ನವೆಂಬರ್‌ 1 ರಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.
ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.
ಇನ್ನೂ ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು. ಕನ್ನಡ ಸಂಘಟನೆಗಳು ರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -spot_img

More articles

- Advertisement -spot_img

Latest article