ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಜಾಮೀನು ಭವಿಷ್ಯ

Date:

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಜಾಮೀನು ಭವಿಷ್ಯ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಎರಡನೇ ಆರೋಪಿ ಆಗಿದ್ದಾರೆ. ಕಳೆದ ನಾಲ್ಕು ತಿಂಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ಇನ್ನೂ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಇಂದು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.
ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...