No menu items!
23.4 C
Munich
Saturday, May 2, 2026

ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

Must read

ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿದರು.
69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ಮಾಡಿದ್ದಾರೆ.ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು
ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ವೇಳೆ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

- Advertisement -spot_img

More articles

- Advertisement -spot_img

Latest article