ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

tnit editors
1 Min Read

ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ವಿಚಾರ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

Share This Article