ಕಾಲ್ತುಳಿತದ ಪ್ರಕರಣ: ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ

Date:

ಕಾಲ್ತುಳಿತದ ಪ್ರಕರಣ: ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ಬಂದಾಗ, ನೆಚ್ಚಿನ ಹೀರೋನನ್ನು ನೋಡುವ ಭರದಲ್ಲಿ ನೂಕು ನುಗ್ಗಲು ಉಂಟಾಗಿ ಜನರ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯೊಬ್ಬರು ಉಸಿರು ಚೆಲ್ಲಿದ್ದು ನಿಮಗೆ ಗೊತ್ತೆ ಇದೆ. ಇದೀಗ ರೇವತಿ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ ನೀಡುತ್ತಿದ್ದಾರೆ ಎಂದು ನಿರ್ಮಾಪಕ ಅಲ್ಲು ಅರವಿಂದ್ ಹೇಳಿದ್ದಾರೆ. ಶ್ರೀತೇಜ್ ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್ ಪರವಾಗಿ 1 ಕೋಟಿ ರೂ., ಪುಷ್ಪ 2 ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ 50 ಲಕ್ಷ ರೂ. ಪರಿಹಾರ ನೀಡ್ತಿದ್ದಾರೆ.
ಅಲ್ಲು ಅರವಿಂದ್ ಹಾಗೂ ಎಫ್‌ಡಿಸಿ ಅಧ್ಯಕ್ಷ ದಿಲ್ ರಾಜು ಮತ್ತು ಪುಷ್ಪ 2 ನಿರ್ಮಾಪಕ ರವಿಶಂಕರ್ ಅವರೊಂದಿಗೆ ಕಿಮ್ಸ್ ಆಸ್ಪತ್ರೆಗೆ ತೆರಳಿದ್ದರು. ಶ್ರೀತೇಜ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಬಳಿಕ ಬಾಲಕನ ತಂದೆ ಭಾಸ್ಕರ್ ಬಳಿ ಮಾತನಾಡಿ ಧೈರ್ಯ ತುಂಬಿದರು. ನಂತರ ಅಲ್ಲು ಅರವಿಂದ್ ಸುದ್ದಿಗೋಷ್ಠಿ ನಡೆಸಿ ಪರಿಹಾರದಲ್ಲಿ ಬಗ್ಗೆ ತಿಳಿಸಿದ್ದಾರೆ. ಶ್ರೀತೇಜ್ ಕುಟುಂಬಕ್ಕೆ 2 ಕೋಟಿ ರೂ. ಈಗಾಗಲೇ ಮೈತ್ರಿ ಮೂವೀಸ್ ಭಾರೀ ಪ್ರಮಾಣದ ಆರ್ಥಿಕ ನೆರವು ನೀಡಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...