ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಸಾವು

Date:

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ನಿದ್ದೆ ‌ಮಂಪರಲ್ಲಿ ಸಿಲಿಂಡರ್ಗೆ ಕಾಲು ತಾಗಿದ ಪರಿಣಾಮ ದೇವರ ಮುಂದೆ ಇದ್ದ ದೀಪಕ್ಕೆ ತಗುಲಿ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಮಾಲಾಧಾರಿಗಳಿಗೆ ಗಾಯಗಳಾಗಿರುವಂತಹ ಘಟನೆ ಜರುಗಿತ್ತು. ಆದ್ರೆ ಇದೀಗ ಅವರಲ್ಲಿ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು.
ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...