No menu items!
11.2 C
Munich
Saturday, July 25, 2026

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Must read

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಪಿ ಅಗ್ರಹಾರ ರೈಲ್ವೆ ಗೇಟ್ ಬಳಿ ನಡೆದಿದೆ. ಸೂರ್ಯ, ಶರತ್‌ ಮೃತ ದುರ್ಧೈವಿಗಳಾಗಿದ್ದು, ಬಿನ್ನಿಪೇಟೆಯ ಸೂರ್ಯ ಮತ್ತು ಶರತ್ ಎಂಬಾತ ಕೆಪಿ ಅಗ್ರಹಾರದವ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ಕೂತಿರುವಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರ ಕಾಲುಗಳು ಮುರಿದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article