ರಾಜ್ಯದ ಜನರಿಗೆ ಗುಡ್ ನ್ಯೂಸ್..! ನಾಳೆ ಯಾವುದೇ ಸಾರಿಗೆ ಮುಷ್ಕರ ಇಲ್ಲ

Date:

ರಾಜ್ಯದ ಜನರಿಗೆ ಗುಡ್ ನ್ಯೂಸ್..! ನಾಳೆ ಯಾವುದೇ ಸಾರಿಗೆ ಮುಷ್ಕರ ಇಲ್ಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 31ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಸದ್ಯ ಸಿಎಂ ಸಿದ್ದರಾಮಯ್ಯರೊಂದಿಗಿನ ಸಭೆ ಬಳಿಕ ಮುಷ್ಕರ ಕೈಬಿಡಲಾಗಿದೆ. ಹಾಗಾಗಿ ಮಂಗಳವಾರ ಎಂದಿನಂತೆ ಕೆಎಸ್ಆರ್ಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಗಳು ಸಂಚಾರ ಮಾಡಲಿವೆ. ಸಂಕ್ರಾಂತಿ ಹಬ್ಬದ ನಂತರ ಜಂಟಿ ಕ್ರಿಯಾ ಸಮಿತಿ ಜೊತೆಗೆ ಸಿಎಂ ಮತ್ತೆ ಸಭೆ ನಡೆಸಲಿದ್ದಾರೆ.
ಹೌದು ಮಂಗಳವಾರ ನಡೆಯಬೇಕಿದ್ದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರವನ್ನು ಮುಂದೂಡಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಜಂಟಿ ಕ್ರಿಯಾ ಸಮಿತಿಯಿಂದ ಆದೇಶ ಪ್ರಕಟಿಸಿದೆ. ಮುಷ್ಕರಕ್ಕೆ ಬೆಂಬಲ ನೀಡಿದ್ದ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಆದೇಶ ಪ್ರಕಟಿಸಲಾಗಿದೆ. ಸಭೆಗೂ ಮುನ್ನ ವೇತನ ಪರಿಷ್ಕರಣೆಗೆ ಸಿಎಂ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಹೇಳಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...