ಯಾವ ದಲಿತ ಲೀಡರ್​ನನ್ನ ನೀವು ಉದ್ಧಾರ ಮಾಡಿದ್ದಿರಿ? ಕಾಂಗ್ರೆಸ್ ಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ?

Date:

ಯಾವ ದಲಿತ ಲೀಡರ್​ನನ್ನ ನೀವು ಉದ್ಧಾರ ಮಾಡಿದ್ದಿರಿ? ಕಾಂಗ್ರೆಸ್ ಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ?

ಕಲಬುರ್ಗಿ:- ಯಾವ ದಲಿತ ಲೀಡರ್​ನನ್ನ ನೀವು ಉದ್ಧಾರ ಮಾಡಿದ್ದಿರಿ? ಎಂದು ಕಾಂಗ್ರೆಸ್ ಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸಚಿನ್ ಪಾಂಚಾಳ್​ ಆತ್ಮಹತ್ಯೆ ಕೇಸ್​ ಸಿಬಿಐಗೆ ಕೊಡಬೇಕು. ಅಂದಾಗ ಮಾತ್ರ ನ್ಯಾಯ ಸಿಗುತ್ತೆ. ಇದರ ಹಿಂದೆ ಕೇವಲ ಸುಪಾರಿ ಗ್ಯಾಂಗ್ ಅಷ್ಟೇ ಅಲ್ಲ, ಹನಿಟ್ರ್ಯಾಪ್ ಗ್ಯಾಂಗ್ ಇದೆ. ನಿಮ್ಮಿಂದ ಕಲ್ಯಾಣ ಕರ್ನಾಟಕದಲ್ಲಿ ಒಬ್ಬನೇ ಒಬ್ಬ ದಲಿತ ಲೀಡರ್ ತಲೆ ಎತ್ತಿಲ್ಲ. ಯಾವ ದಲಿತ ಲೀಡರ್​ನನ್ನ ಉದ್ಧಾರ ಮಾಡಿದ್ದಿರಿ. ನನ್ನನ್ನು ಕೆಣಕಿದರೆ ನಾನು ಕುಟುಕದೇ ಬಿಡಲ್ಲ ಎಂದರು.

ಕಾಂಗ್ರೆಸ್ಸಿಗರೇ ನಿಮ್ಮಲ್ಲಿ 3 ಬಾರಿ ಗೆದ್ದ ಅನೇಕ ದಲಿತರು ಶಾಸಕರಿದ್ದಾರೆ. ಅವರನ್ನೇಕೆ ಮಂತ್ರಿ ಮಾಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಖರ್ಗೆ ಸಾಹೇಬ್ರೆ ನೀವು ಧರ್ಮಸಿಂಗ್ ಅವರು ಸ್ನೇಹಿತರಿದ್ದೀರಿ. ಅವರ ಮಗ ಡಾ.ಅಜಯ್ ಸಿಂಗ್ ಸತತ ಮೂರು ಭಾರಿ ಗೆದ್ದಿದ್ದಾರೆ. ಅವರನ್ನೇಕೆ ಮಂತ್ರಿ ಮಾಡಿಲ್ಲ. ನಿಮ್ಮ ಮಗ ಎಲ್ಲರಿಗಿಂತ ಮೇದಾವಿಯಾ? ಇಲ್ಲಿ ಜಾತಿ, ಧರ್ಮವಿಲ್ಲ ಮಾನವೀಯತೆ ಮುಖ್ಯ. ಸಚಿನ್ ಕಟುಂಬಕ್ಕೆ ನ್ಯಾಯ ಕೊಡಬೇಕು. ನಿಮ್ಮ ಉಸ್ತುವಾರಿಯ ಕಲಬುರಗಿಯಲ್ಲಿ ಅರಾಜಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇನ್ನೂ ಸಚಿನ್ ಪಾಂಚಾಳ್​ ಆತ್ಮಹತ್ಯೆ ಕೇಸ್​​ ಸಂಬಂಧ ನ್ಯಾಯ ಕೊಡಿ ಅಂದರೆ ಎಳನೀರು, ಟೀ ಕಾಫಿ ಕೊಡುತ್ತೇವೆ ಅಂತಾರೆ. ನಾವು ನಿಮ್ಮ ಸಂದಾನಕ್ಕೆ ಬಂದಿದ್ದೀವಾ? ನಾಲ್ಕು ಜನರನ್ನು ನಿಲ್ಲಿಸಿ ಎಳನೀರು ಕೊಡ್ತೀವಿ ಅಂತಿರಲ್ಲ ನಾಚಿಕೆ ಆಗಲ್ವಾ ಎಂದು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...