ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು: ಜೋಶಿ!

Date:

ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು: ಜೋಶಿ!

ಹುಬ್ಬಳ್ಳಿ:- ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಡಾ. ಬಿಆರ್​ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್​ ಲಾಲ್​ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್​ ಅಂಬೇಡ್ಕರ್​ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಬಿಆರ್​ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿಆರ್​ ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, “ರಾಜೀನಾಮೆಯಿಂದ ಏನೂ ನಷ್ಟವಿಲ್ಲ” ಎಂದರು.

ಕಾಂಗ್ರೆಸ್​ ನಾಯಕರು ಬಿಆರ್​ ಅಂಬೇಡ್ಕರ್​ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ. ದಲಿತರು ಕಾಂಗ್ರೆಸ್​ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್​ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ. ದಲಿತರು ಜಾಗೃತರಾಗಿರಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...