ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು: ಜೋಶಿ!

tnit editors
1 Min Read

ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು: ಜೋಶಿ!

ಹುಬ್ಬಳ್ಳಿ:- ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಡಾ. ಬಿಆರ್​ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್​ ಲಾಲ್​ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್​ ಅಂಬೇಡ್ಕರ್​ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಬಿಆರ್​ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿಆರ್​ ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, “ರಾಜೀನಾಮೆಯಿಂದ ಏನೂ ನಷ್ಟವಿಲ್ಲ” ಎಂದರು.

ಕಾಂಗ್ರೆಸ್​ ನಾಯಕರು ಬಿಆರ್​ ಅಂಬೇಡ್ಕರ್​ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ. ದಲಿತರು ಕಾಂಗ್ರೆಸ್​ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್​ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ. ದಲಿತರು ಜಾಗೃತರಾಗಿರಬೇಕು ಎಂದು ಹೇಳಿದರು.

Share This Article