No menu items!
13.9 C
Munich
Sunday, May 24, 2026

ಸತೀಶ್ ಜಾರಕಿಹೊಳಿಗೆ ನೋಟಿಸ್ ವದಂತಿ ವಿಚಾರ: ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದೇನು..?

Must read

ಸತೀಶ್ ಜಾರಕಿಹೊಳಿಗೆ ನೋಟಿಸ್ ವದಂತಿ ವಿಚಾರ: ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದೇನು..?

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದಿದ್ದಾರೆ.
ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ವಿಚಾರ ಸೇರಿದಂತೆ, ಸಿಎಂ ಸೀಟಿನ ಬಗ್ಗೆ ಮಾತಾಡುತ್ತಿದ್ದ ಸಚಿವರಿಗೆ ನೋಟಿಸ್ ನೀಡುವ ವದಂತಿಗೆ ತೆರೆ ಎಳೆದಿದ್ದಾರೆ.

- Advertisement -spot_img

More articles

- Advertisement -spot_img

Latest article