ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮತ್ತೊಂದು ಬಲಿ

Date:

ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮತ್ತೊಂದು ಬಲಿ

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜೀವ ಕಳೆದುಕೊಂಡವರ ಸಂಖ್ಯೆ ಏರುತ್ತಲೇ ಇದೆ. ಸಾಲ ಕೊಟ್ಟವರ ಕಾಟಕ್ಕೆ ಜನರು ನೆಮ್ಮದಿಯಿಂದ ಜೀವನ ಮಾಡದಂತಾಗಿದೆ. ಮಿತಿಮೀರಿದ ಬಡ್ಡಿಗೆ ಕೂಲಿ ನಾಲಿ ಮಾಡಿ ಸಾಲ ಕಟ್ಟಲು ಆಗದೆ ಜನ ಗೋಳಾಡುತ್ತಿದ್ದಾರೆ. ಇಂತಹ ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರ ಮೂಗುದಾರ ಹಾಕಬೇಕಿದೆ.
ಇದೀಗ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿಯಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕು ವಳೆಗೆರ ಮೆಣಸ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಕಾಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಒಳಗೆರೆಮೆಣಸ ಗ್ರಾಮದ ಲೋಹಿತ್ @ ನವೀನ್ (35) ಮೃತ ದುರ್ದೈವಿಯಾಗಿದ್ದು, ಈತ ವಿವಿಧ ಮೈಕ್ರೋ ಫೈನಾನ್ಸ್ ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದಿದ್ದನು. ಕಳೆದ ವಾರ ಸಾಲಗಾರರ ಕಾಟಕ್ಕೆ ಬೇಸತ್ತು K.R.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಕೆ ಮಾಡಿದ್ದನು.
ಅಲ್ಲಿಂದಲೂ ರಕ್ಷಣೆ ಸಿಗದಕ್ಕೆ ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ಇಂದು ಮುಂಜಾನೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...