ಯುವಕನನ್ನು ಕೊಲೆ ಮಾಡಿ ಎಸ್ಕೇಪ್: ಬಂಧಿಸಲು ಹೋದ ಖಾಕಿ ಮೇಲೆ ಅಟ್ಯಾಕ್, ಪೊಲೀಸರಿಂದ ಗುಂಡೇಟು!

Date:

ಯುವಕನನ್ನು ಕೊಲೆ ಮಾಡಿ ಎಸ್ಕೇಪ್: ಬಂಧಿಸಲು ಹೋದ ಖಾಕಿ ಮೇಲೆ ಅಟ್ಯಾಕ್, ಪೊಲೀಸರಿಂದ ಗುಂಡೇಟು!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.

ಅಭಿಷೇಕ್, ವಿನೋದ್, ಯಲ್ಲಪ್ಪ ಗಾಯಾಳುಗಳು ಎಂದು ಗುರುತಿಸಲಾಗಿದೆ. ತಡರಾತ್ರಿ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ಆಕಾಶ್ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಭಾಗಿಯಾಗಿರುವ ಮೂವರನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು 9 ಸುತ್ತು ಗುಂಡು ಹಾರಿಸಿದರು. 4 ಸುತ್ತು ಗಾಳಿಯಲ್ಲಿ , 5 ಸುತ್ತು ಗುಂಡುಗಳನ್ನು ಆರೋಪಿಗಳ ಕಾಲಿಗೆ ಹೊಡೆದರು. ಬಳಿಕ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಇನ್ಸ್​ಪೆಕ್ಟರ್​ಗಳಾದ ಶ್ರೀಮಂತ ಹುಣಸಿಕಟ್ಟಿ, ಸುನೀಲ್ ಮತ್ತು ಪೇದೆಗಳಾದ ಮುತ್ತು ಲಮಾಣಿ, ಶರಣಗೌಡ ಲಮಾಣಿ ಎಂಬುವರಿಗೆ ಗಾಯವಾಗಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಕಾಶ್ ಕೊಲೆ ಹಿಂದೆ ಹಳೇ ದ್ವೇಷ, ಹವಾ ಸೃಷ್ಟಿ ಮಾಡುವ ಉದ್ದೇಶವಿದೆ ಎಂದು ತಿಳಿದುಬಂದಿದೆ

ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...