ಸುಧಾಕರ್ ಆಡಿರುವ ಮಾತುಗಳು ಅವರಿಗಾಗಲೀ ನನಗಾಗಲೀ ಶೋಭೆ ನೀಡಲ್ಲ: ಬಿವೈ ವಿಜಯೇಂದ್ರ

Date:

ಸುಧಾಕರ್ ಆಡಿರುವ ಮಾತುಗಳು ಅವರಿಗಾಗಲೀ ನನಗಾಗಲೀ ಶೋಭೆ ನೀಡಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ಸುಧಾಕರ್ ಆಡಿರುವ ಮಾತುಗಳು ಅವರಿಗಾಗಲೀ ನನಗಾಗಲೀ ಶೋಭೆ ನೀಡಲ್ಲ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇಡೀ ದೇಶದಲ್ಲಿ ಒಂದೇ ತೆರನಾಗಿದೆ, ತಾನು ಬದಲಾಯಿಸುವ ಅಥವಾ ಹಸ್ತಕ್ಷೇಪ ಮಾಡುವುದಕ್ಕೆ ಹೋಗಿಲ್ಲ, ಆಯ್ಕೆಯಾಗಿರುವ ವ್ಯಕ್ತಿ ಪಕ್ಷದ ಕಾರ್ಯಕರ್ತ ಮತ್ತು ಸುಧಾಕರ್ ಸಂಬಂಧಿಕನಾಗಿದ್ದಾನೆ ಎಂದು ಹೇಳಿದರು.
ಇನ್ನೂ ತಮ್ಮ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಸುಧಾಕರ್ ಅವರು, ಸಮಾಧಿ ಮಾಡಲಾಗುತ್ತಿದೆ ಎಂಬ ಮಾತುಗಳನ್ನು ಆಡಬಾರದು, ಅದು ತನಗೆ ಮತ್ತು ಅವರಿಗೂ ಶೋಭೆ ನೀಡಲ್ಲ, ನಾನು ತಿದ್ದುಕೊಳ್ಳಬೇಕು ಅಂತ ಅವರು ಮತ್ತು ಇತರರು ಹೇಳಿದ್ದಾರೆ.
ಏನಾದರೂ ಇದ್ರೆ ನಾನು ಖಂಡಿತ ತಿದ್ದಿಕೊಳ್ತೇನೆ. ಸುಧಾಕರ್ ಅವರು ತಾಳ್ಮೆ ಮುಗೀತು ಇನ್ನು ಯುದ್ಧ ಎಂದಿದ್ದಾರೆ. ಆ ರೀತಿ ಮಾತಾಡಬಾರದು. ನಾನು ಸುಧಾಕರ್ ಅವರ ಜೊತೆ ಮತ್ತು ಇತರರ ಜೊತೆ ಮಾತಾಡ್ತೀನಿ. ನಾನು ಪಕ್ಷ ಸಂಘಟನೆ ಮಾತ್ರ ಮಾಡ್ತಿದ್ದೇನೆ. ನನ್ನ ಮೇಲೆ ತಪ್ಪು ಹೊರೆಸೋದು ಬೇಡ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...