ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ: ವಿಪಕ್ಷ ನಾಯಕ ಆರ್ ಅಶೋಕ್!
ಬೆಂಗಳೂರು : ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ..
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ನವೆಂಬರ್ 15, 16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ. ಡಿಕೆಶಿ ವರ್ಸಸ್ ಸಿದ್ದು ಮ್ಯೂಸಿಕಲ್ ಚೇರ್ ಸ್ಪರ್ಧೆ ಇರುತ್ತದೆ. ಇದು ಪಕ್ಕಾ ನ್ಯೂಸ್ ಅಂತಾ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಈಗಾಗಲೇ ಒಪ್ಪಂದ ಆಗಿದೆ. ನಾನು ಜ್ಯೋತಿಷಿ ಅಲ್ಲ ಆದ್ರೆ ನಂಗೆ ಕಾಂಗ್ರೆಸ್ನಲ್ಲಿ ಸ್ನೇಹಿತರು ಇದ್ದಾರೆ, ಹೀಗಾಗಿ ಈ ವಿಚಾರ ತಿಳಿದಿದೆ. ಡಿಕೆಶಿ ಕುರ್ಚಿ ಒದ್ದಾದ್ರೂ ಅಧಿಕಾರ ಕಿತ್ತುಕೊಳ್ತಾರೆ ಅಂತಾ ಆಶೋಕ್ ಹೇಳಿದ್ದಾರೆ.