ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ: ಬಿ.ವೈ.ವಿಜಯೇಂದ್ರ

Date:

ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ: ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಈ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದೇವೆ.
ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಇನ್ನೂ ಯತ್ನಾಳ್ ಬಣದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದರು.

Share post:

Subscribe

spot_imgspot_img

Popular

More like this
Related

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...