ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು; ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್

Date:

ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು; ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್

 

 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಅವರು ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನ ಕಾಲಿಗೆ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಅವಿತು ಕುಳಿತಿದ್ದನು.

ಕಳೆದ ತಿಂಗಳು 28ನೇ ತಾರೀಖಿನ ರಾತ್ರಿ ಮಾಜಿ ರೌಡಿ ಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಶ್ರೀನಿವಾಸ್ ಗ್ಯಾಂಗ್ ಪರಾರಿಯಾಗಿದ್ದತ್ತು. ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಗುಬ್ಬಚ್ಚಿ ಸೀನ ಅವಿತು ಕುಳಿತಿದ್ದ ಎನ್ನುವ ಮಾಹಿತಿ ಮೇರೆಗೆ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಗುಬ್ಬಚ್ಚಿ ಸೀನ ಯತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ತಿಳಿಸಿದ್ದಾರೆ. ಆಗ ರೌಡಿಶೀಟರ್ ಗುಬ್ಬಚ್ಚಿ ಸೀನ ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ನವೀನ್ ಅವರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ. ರೌಡಿ ಶೀಟರ್ ಗುಬ್ಬಚ್ಚಿ ಸೀನನ ಕಾಲಿಗೆ ಗುಂಡೇಟು ಬಿದ್ದಿದ್ದು, ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...