ಟ್ರಾಕ್ಟರ್ ಕಳ್ಳತನ ಮಾಡ್ತಿದ್ದ ನಾಲ್ವರು ಆರೋಪಿಗಳು ಅರೆಸ್ಟ್!

Date:

ಟ್ರಾಕ್ಟರ್ ಕಳ್ಳತನ ಮಾಡ್ತಿದ್ದ ನಾಲ್ವರು ಆರೋಪಿಗಳು ಅರೆಸ್ಟ್!

ಬೆಂಗಳೂರು:- ಟ್ರಾಕ್ಟರ್ ಕಳ್ಳತನ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಕೋಣನಕುಂಟೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.

ತುಮಕೂರಿನ‌ ನೊಣವಿನಕೆರೆಯಲ್ಲಿ ಸಾಧಿಕ್, ಸೈಫುಲ್ಲಾ, ಪರ್ವೇಜ್, ಸಾಧಿಕ್ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು, ಬೆಂಗಳೂರಲ್ಲಿ ನಿಂತಿದ್ದ ಟ್ರಾಕ್ಟರ್ ಗಳ‌ ಕಳ್ಳತನ ಮಾಡಿದ್ದರು.

ನೊಣವಿನ‌ ಕೆರೆಯಲ್ಲಿ ಸೈಫುಲ್ಲ ಎಂಬಾತನಿಗೆ ಮಾರಾಟ ಮಾಡಿದ್ದಾರೆ. ಬಂಧಿತರಿಂದ 20 ಲಕ್ಷ ಮೌಲ್ಯದ ನಾಲ್ಕು ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ಮೊದಲು ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ನಡೆದಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು, ಪರಿಶೀಲನೆ ನಡೆಸಿದ್ದರು.

ನೊಣವಿನಕೆರೆವರೆಗೆ ಫಾಲೋ ಮಾಡಿ ಹೊರಟಿದ್ದರು. ಆದರೆ ಮೊದಲಿಗೆ ಪೊಲೀಸರಿಗೆ ಆರೋಪಿಗಳು ಸಿಕ್ಕಿರಲಿಲ್ಲ. ಮತ್ತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಟ್ರ್ಯಾಕ್ಟರ್ ಕಳ್ಳತನವಾಗಿತ್ತು. ವಿಚಾರ ಗೊತ್ತಾಗಿ ನೊಣವಿನ ಕೆರೆಯಲ್ಲಿ ಪೊಲೀಸರು ಕಾಯುತ್ತಿದ್ದರು. ಆರೋಪಿಗಳು ಟ್ರ್ಯಾಕ್ಟರ್ ಜೊತೆಗೆ ಬರ್ತಿದ್ದಂತೆ ಅರೆಸ್ಟ್ ಮಾಡಿದ್ದಾರೆ.

ಕೋಣನಕುಂಟೆ ಪೊಲೀಸರಿಂದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕೂಲಿ‌ ಕೆಲಸ ಮಾಡಿಕೊಂಡಿದ್ದ ಆರೋಪಿಗಳು,
ಹಣ ಸಂಪಾದನೆ ಮಾಡಲು ಟ್ರ್ಯಾಕ್ಟರ್ ಕಳ್ಳತನ ಹಾದಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಟ್ರ್ಯಾಕ್ಟರ್ ಡೌನ್‌ ನಲ್ಲಿ ನಿಂತಿದ್ದತೆ ತಳ್ಳಿ ಸ್ಟಾರ್ಟ್ ಮಾಡಿಕೊಳ್ತಿದ್ರು. ಇದೇ ರೀತಿ ನಿಂತಿದ್ದ ಟ್ರ್ಯಾಕ್ಟರ್ ಗಳ‌ ಕಳ್ಳತನ ಮಾಡಿರೋದು ಬೆಳಕಿಗೆ ಬಂದಿದೆ.

Share post:

Subscribe

spot_imgspot_img

Popular

More like this
Related

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...