No menu items!
13.5 C
Munich
Saturday, July 25, 2026

ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ: ಎಂ.ಪಿ ರೇಣುಕಾಚಾರ್ಯ

Must read

ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ: ಎಂ.ಪಿ ರೇಣುಕಾಚಾರ್ಯ

 

 

ಬೆಂಗಳೂರು: ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು.

ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ? ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ. ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ ಎಂದರು.

ಇನ್ನೂ ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ, ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಪ್ಲಾಂಟ್ ಮಾಡಿಸ್ತಿದ್ದಾರೆ. ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

- Advertisement -spot_img

More articles

- Advertisement -spot_img

Latest article