ನವದೆಹಲಿಯಲ್ಲಿ ಭೀಕರ ಕಾಲ್ತುಳಿತ: ರೈಲು ನಿಲ್ದಾಣದಲ್ಲಿ 15 ಜನರ ದಾರುಣ ಸಾವು!

Date:

ನವದೆಹಲಿ:- ಅತೀ ಹೆಚ್ಚಿನ ಜನ ಸಂದಣಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 15 ಮಂದಿ ಸಾವನ್ನಪ್ಪಿದ ಘಟನೆ ನವದೆಹಲಿ ರೈಲು ನಿಲ್ದಾಣದಲ್ಲಿ ಜರುಗಿದೆ.

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದೆ. 11 ಜನರಿಗೆ ಗಾಯಗೊಂಡಿದ್ದು, ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್​ರಾಜ್​ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್​ಫಾರ್ಮ್​ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್​​​ರಾಜ್​ಗೆ ಹೊರಡುವ​ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್​ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎನ್​ಡಿಆರ್​ಎಫ್​ ಮಾಹಿತಿ ನೀಡಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...