ಪ್ರತಿ ದಿನ ಕಡಲೆ ಬೀಜ ತಿನ್ನೋದ್ರಿಂದ ಏನ್ ಲಾಭ ಗೊತ್ತಾ?

Date:

ಪ್ರತಿ ದಿನ ಕಡಲೆ ಬೀಜ ತಿನ್ನೋದ್ರಿಂದ ಏನ್ ಲಾಭ ಗೊತ್ತಾ?

ಕಡಲೆಕಾಯಿ ಅಥವಾ ಪೀನಟ್ ಎಂದು ಕರೆಯಲ್ಪಡುವ ಕಡಲೆಕಾಯಿ ಒಂದು ರುಚಿಕರವಾದ ಮತ್ತು ಆರೋಗ್ಯಕರವಾದ ಪದಾರ್ಥವಾಗಿದೆ. ಆರೋಗ್ಯದ ಅದ್ಭುತ ಪ್ರಯೋಜನಗಳನ್ನು ಹೊಂದಿರುವ ಇದು ಹೆಚ್ಚಿನ ಪ್ರೋಟಿನ್ ಅಂಶವನ್ನು ಒಳಗೊಂಡಿದೆ. ಇದು ಹೊಂದಿರುವ ಉತ್ತಮ ರುಚಿಯಿಂದ ಹಲವಾರು ರೀತಿಯ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ. ಇದು ಉತ್ತಮ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.
ಚರ್ಮದ ರಕ್ಷಣೆ ಕಡಲೆಕಾಯಿಯ ಸಿಪ್ಪೆಯಲ್ಲಿರುವ ಬಯೋಆಕ್ಟಿವ್ಸ್ ಮತ್ತು ಫೈಬರ್ ರೋಗದಿಂದ ರಕ್ಷಿಸುತ್ತದೆ ಮತ್ತು ಚರ್ಮದಲ್ಲಿನ ಕಾಯಿಲೆಯನ್ನು ದೂರ ಮಾಡಿ ಚರ್ಮವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಚರ್ಮವು ಒಣಗದಂತೆ ನೋಡಿಕೊಳ್ಳುವುದರ ಜತೆಗೆ ಹೆಚ್ಚು ಕಾಂತಿಯನ್ನು ನೀಡುತ್ತದೆ.
ಹೃದಯಕ್ಕೆ ಒಳ್ಳೆಯದು ಕಡಲೆಕಾಯಿ ಹೃದ್ರೋಗ, ಕ್ಯಾನ್ಸರ್ ಮತ್ತು ಹೃದಯಾಘಾತವನ್ನು ತಡೆಗಟ್ಟುವ ಗುಣಗಳನ್ನು ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ನೀವು ಬಳಲುತ್ತಿದ್ದರೆ, ಹುರಿದ ಕಡಲೆಕಾಯಿಯ ಕಂದು ಬಣ್ಣದ ಸಿಪ್ಪೆಯೊಂದಿಗೆ ತಿನ್ನಿ. ನೆನಪಿಡಿ ಒಣಗಿದ ಸಿಪ್ಪೆಯನ್ನು ಮೊದಲೇ ತೆಗೆಯಿರಿ.
ಹುಣ್ಣು ನಿವಾರಕ ಹುರಿದ ಕಡಲೆಕಾಯಿ ಹೊಟ್ಟುಗಳು ಹಣ್ಣುಗಳಷ್ಟೇ ಪೌಷ್ಟಿಕಾಂಶ ನೀಡುತ್ತದೆ. ಹುರಿದ ಹೊಟ್ಟು ಹೆಚ್ಚು ಉಪಯುಕ್ತವಾಗಿದೆ. ಬಾಯಿ ಹುಣ್ಣಿನಿಂದ ಬಳಲುತ್ತಿರುವವರು ಇದನ್ನು ಸೇವಿಸುವುದು ಸೂಕ್ತ. ಹುರಿದ ಕಡಲೆಕಾಯಿಯಲ್ಲಿ ವಿಟಮಿನ್ ಸಿ ಮತ್ತು ಗ್ರೀನ್ ಟೀಗಿಂತ ಹೆಚ್ಚಿನ ಉತ್ಕರ್ಷಣ ನಿರೋಧಕ ಅಂಶವಿದೆ.
ತೂಕ ಇಳಿಕೆಗೆ ಸಹಾಯಕ ಕಡಲೆಕಾಯಿ ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಸಿಪ್ಪೆಯೊಂದಿಗೆ ಕಡಲೆಕಾಯಿ ತಿನ್ನಲು ವೈದ್ಯರು ಸೂಚಿಸುತ್ತಾರೆ.
ಇನ್ನಿತರ ಪ್ರಯೋಜನಗಳು ಕಡಲೆಕಾಯಿ ತಾಳ್ಮೆ ಹೆಚ್ಚಿಸಲು ಸಹಾಯ ಮಾಡುತ್ತದೆ. ದೇಹದಲ್ಲಿನ ಉರಿಯೂತ ಮತ್ತು ತುರಿಕೆ ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ. ಸಿಪ್ಪೆ ಸೇರಿದಂತೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಕಡಲೆಕಾಯಿಗಳನ್ನು ತಿನ್ನುವುದು ನಮ್ಮ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಉಂಟುಮಾಡುತ್ತದೆ.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...