ತ್ರಿವಳಿ ತಲಾಕ್ ವಿಷಯಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಎದ್ದಿರುವ ವಿವಾದ ಆಧಾರರಹಿತವಾದದ್ದು ಇದನ್ನು ಏಕರೂಪ ನಾಗರೀಕ ಸಂಹಿತೆಯೊಂದಿಗೆ ಸೇರಿಸುವ ಅಗತ್ಯ ಇಲ್ಲ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಕೇರಳದ ಕೊಚ್ಚಿಯಲ್ಲಿ ದೂರದರ್ಶನಕ್ಕೆ ಭೇಟಿ ನೀಡಿ ಮಾತನಾಡಿದ ಅವರು ನಮ್ಮ ಸರ್ಕಾರದ ಮುಖ್ಯ ಉದ್ದೇಶ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವುದು. ಈ ಕುರಿತಂತೆ ಸರ್ಕಾರ ಸುಪ್ರೀಂ ಕೋರ್ಟ್ಗೆ ತ್ರಿವಳಿ ತಲಾಖ್ ಕುರಿತಂತೆ ತಮ್ಮ ನಿಲುವನ್ನು ತಿಳಿಸಿದ್ದೇವೆ. ಅಷ್ಟು ಬಿಟ್ರೆ ಈ ವಿಷಯವನ್ನು ಏಕರೂಪ ನಾಗರೀಕ ಸಂಹಿತೆಯೊಂದಿಗೆ ಸೇರಿಸೋದು ಅಷ್ಟೊಂದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ಇನ್ನು ಕೊಚ್ಚಿಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡ ನಾಯ್ಡು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಾದ ಸ್ವಚ್ಭಾರತ್, ಸ್ಮಾರ್ಟ್ಸಿಟಿ ಪರಿಕಲ್ಪನೆ, ಅಮೃತ್ ಹೃದಯ್ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.
Like us on Facebook The New India Times
POPULAR STORIES :
ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್..! #Video
ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಟೀವ್ ಜಾಬ್ಸ್ ನ ಕೊನೆಯ ಪತ್ರ
ಅಸಲಿಗೆ ‘ಒಳ್ಳೆಯ ಹುಡುಗ’ನ ಹೆಸರು ಪ್ರಥಮ್ ಅಲ್ಲ..! ಮತ್ತೇನು?
ಮೊಬೈಲ್ ಚಾರ್ಜರನ್ನು ವೈರ್ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!