ಭೀಕರ ಅಪಘಾತ: ನಾಲ್ಕು ಪಲ್ಟಿಯಾದ ಕಾರು, ಓರ್ವ ಸಾವು! ಭಯಾನಕ ದೃಶ್ಯ ಸೆರೆ!
ದೊಡ್ಡಬಳ್ಳಾಪುರ:- ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ನಾಲ್ಕು ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಜರುಗಿದೆ.
20 ವರ್ಷದ ಮೊಹಮ್ಮದ್ ಯೂನಿಸ್ ಮೃತ ಯುವಕ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ. ಸೋಮವಾರ ರಂದು ಐವರು ಸ್ನೇಹಿತರು ಕಾರಿನಲ್ಲಿ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೊರಟಿದ್ದರು. ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ