ಕರ್ನಾಟಕದಾದ್ಯಂತ 12,533 ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ಗೈರು!
ಬೆಂಗಳೂರು:- ಕರ್ನಾಟಕದಾದ್ಯಂತ 12,533 ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ಗೈರಾಗಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಎಸಗಿದ ಅಥವಾ ದುಷ್ಕೃತ್ಯ ಎಸಗಿದ ಪ್ರಕರಣಗಳು ವರದಿಯಾಗಿಲ್ಲ. 2024 ರ ಪರೀಕ್ಷೆಗಳಿಂದ ಜಾರಿಗೆ ತರಲಾದ ಪರೀಕ್ಷೆಗಳ ವೆಬ್ ಸ್ಟ್ರೀಮಿಂ ಹಾಗೂ ಇತರ ಕಟ್ಟುನಿಟ್ಟಿನ ಕ್ರಮಗಳು ಅಕ್ರಮವನ್ನು ತಟೆಗಟ್ಟುವಲ್ಲಿ ನೆರವಾಗಿವೆ.
ಮೂರು ಪರೀಕ್ಷೆಗಳ ಆಯ್ಕೆ ಇರುವುದರಿಂದ ಗೈರುಹಾಜರಾದವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯ ಬಗ್ಗೆ ವಿಶ್ವಾಸ ಹೊಂದಿಲ್ಲದಿದ್ದರೆ ಇನ್ನೂ ಎರಡು ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿರುವುದರಿಂದ, ಅವರು ಪರೀಕ್ಷೆಗಳಿಗೆ ಗೈರಾಗುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.