ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ಅಧ್ಯಯನಗಳಿಂದ ಬಹಿರಂಗ!

Date:

ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ಅಧ್ಯಯನಗಳಿಂದ ಬಹಿರಂಗ!

ಬೆಂಗಳೂರು:- ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳವಾಗಿದ್ದು, ಇದಕ್ಕೆ ನಮ್ಮ ಮೆಟ್ರೋ ದರ ಏರಿಕೆ ಕಾರಣ ಎಂದು ಅಧ್ಯಯನಗಳಿಂದ ಬಹಿರಂಗವಾಗಿದೆ.

ಮೆಟ್ರೋ ದುಬಾರಿ ಬೆನ್ನಲ್ಲೇ ಸಾರ್ವಜನಿಕರು ಮೆಟ್ರೋ ಬಿಟ್ಟು ಸ್ವಂತ ವಾಹನಗಳಲ್ಲಿ ಓಡಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಫೆಬ್ರವರಿ 9 ರಂದು ನಮ್ಮೆ ಮೆಟ್ರೋ ಪ್ರಯಾಣದ ದರವನ್ನು ಏರಿಕೆ ಮಾಡಿತ್ತು. ದರ ಏರಿಕೆ ಬಳಿಕ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿನ ಇಳಿಕೆಯಾಗಿದೆ. “ನಮ್ಮ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು ಶೇ. 10.5 ರಷ್ಟು ಇಳಿಕೆಯಾಗಿದೆ ಎಂದು ಎಂದು ಬಿಎಂಆರ್​ಸಿಎಲ್​ ಹೇಳಿದೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ಸಾರಿಗೆ ವಲಯದಿಂದ ಶೇಕಡಾ 40 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದ್ದು, ಧೂಳಿನಿಂದ ಶೇ.17 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದೆ. ದರ ಏರಿಕೆ ನಂತರ ಫೆಬ್ರವರಿ 10ರಿಂದ ಮಾಲೀನ್ಯ ಹೆಚ್ಚಾಗಿದೆ. ಈ ಮೂಲಕ ಜನರು ಮೆಟ್ರೋ ಬಿಟ್ಟು ಸ್ವಂತ ವಾಹನದಲ್ಲಿ ಓಡಾಡುವವರ ಸಂಖ್ಯೆ ಅಧಿಕವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ದಲ್ಲೂ ಮಾಲೀನ್ಯ ಏರಿಕೆ ಕಂಡಿದೆ

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...