KKR vs RCB: ಕೊಲ್ಕತ್ತಾ ವಿರುದ್ಧ ಆರ್​ಸಿಬಿ ತಂಡಕ್ಕೆ 7 ವಿಕೆಟ್​ಗಳ ಜಯ..!

Date:

KKR vs RCB: ಕೊಲ್ಕತ್ತಾ ವಿರುದ್ಧ ಆರ್​ಸಿಬಿ ತಂಡಕ್ಕೆ 7 ವಿಕೆಟ್​ಗಳ ಜಯ..!

 

ಐಪಿಎಲ್ ಸೀಸನ್-18ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಬಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ.

175 ರನ್​ಗಳ ಬೆನ್ನಟ್ಟಿದ ಆರ್​ಸಿಬಿಗೆ ಮೊದಲ ಓವರ್​ನಲ್ಲೇ ಸ್ಫೋಟಕ ಆರಂಭ ಸಿಕ್ಕಿತು. ಈ ಓವರ್​ನಲ್ಲಿ ಫಿಲ್ ಸಾಲ್ಟ್ 1 ಬೌಂಡರಿ ಹೊಡೆದರೆ, ವಿರಾಟ್ ಕೊಹ್ಲಿ ಕೂಡ ಬೌಂಡರಿಯೊಂದಿಗೆ ಖಾತೆ ತೆರೆದರು. ಈ ಓವರ್​ನಿಂದ ಒಟ್ಟು 12 ರನ್​ಗಳು ಬಂದವು. 2ನೇ ಓವರ್​ನಲ್ಲಿ ಮ್ಯಾಜಿಕಲ್ ಸ್ಪೆಲ್ ಮಾಡಿದ ಸ್ಪೆನ್ಸರ್ ಜಾನ್ಸನ್ ಕೇವಲ 5 ರನ್​ ನೀಡಿದರು. ಮೂರನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ವೈಭವ್ ಆರೋರಾ ಮೇಲೆ ಸಾಲ್ಟ್ ಬೌಂಡರಿಗಳ ಮಳೆಗರೆದರು. ಈ ಓವರ್​ನಲ್ಲಿ ಸಾಲ್ಟ್ 1 ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದರೆ, ವಿರಾಟ್ ಕೊಹ್ಲಿ ಕೂಡ 2 ಬೌಂಡರಿ ಕಲೆಹಾಕಿದರು.

ವರುಣ್ ಓವರ್​ನಲ್ಲಿ 21 ರನ್
ಹೀಗಾಗಿ 3 ಓವರ್​ಗಳ ಮುಕ್ತಾಯಕ್ಕೆ ಆರ್​ಸಿಬಿ 37 ರನ್ ಕಲೆಹಾಕಿತು. ಇದೇ ವೇಳೆ ನಾಯಕ ರಹಾನೆ ತಂಡದ ಭರವಸೆಯ ಬೌಲರ್​ ವರುಣ್ ಚಕ್ರವರ್ತಿಗೆ ಬೌಲಿಂಗ್ ನೀಡಿದರು. ವರುಣ್ ಕೂಡ ಮೊದಲ 2 ಎಸೆತಗಳಲ್ಲಿ ಕೇವಲ 3 ರನ್ ಬಿಟ್ಟುಕೊಟ್ಟರು. ಆದರೆ ಉಳಿದ 4 ಎಸೆತಗಳಲ್ಲಿ ಬೌಂಡರಿಗಳು ಸಿಡಿದವು. ಮಾಜಿ ಕೆಕೆಆರ್ ಆಟಗಾರ ಫಿಲ್ ಸಾಲ್ಟ್ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ ಈ ಓವರ್​ನಲ್ಲಿ 21 ರನ್ ಕಲೆಹಾಕಿದರು.
ಐದನೇ ಓವರ್​ನಲ್ಲಿ ಉಗ್ರರೂಪ ತಾಳಿದ ವಿರಾಟ್ ಕೊಹ್ಲಿ, ಸ್ಪೆನ್ಸರ್ ಜಾನ್ಸನ್ ಎಸೆದ ಈ ಓವರ್​ನ ಮೊದಲ ಎರಡು ಎಸೆತಗಳನ್ನು ಸಿಕ್ಸರ್​ಗಟ್ಟಿದರು. ಹಾಗೆಯೇ ಈ ಓವರ್​ನ ಕೊನೆಯ ಎಸೆತವನ್ನು ಸಾಲ್ಟ್ ಬೌಂಡರಿ ಬಾರಿಸಿದರು. ಐದನೇ ಓವರ್ ಅಂತ್ಯಕ್ಕೆ ಆರ್​ಸಿಬಿ ಸ್ಕೋರ್ 75 ರನ್ ಆಗಿತ್ತು. ಆದರೆ 6ನೇ ಓವರ್​ನಲ್ಲಿ ಮಿತವ್ಯಯದ ಬೌಲಿಂಗ್ ಮಾಡಿದ ಹರ್ಷಿತ್ ರಾಣಾ ಕೇವಲ 5 ರನ್ ಬಿಟ್ಟುಕೊಟ್ಟು ಆರ್​ಸಿಬಿ ವೇಗಕ್ಕೆ ಕಡಿವಾಣ ಹಾಕಿದರು. ಆದಾಗ್ಯೂ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ 80 ರನ್ ಕಲೆಹಾಕುವಲ್ಲಿ ಯಶಸ್ವಿಯಾಯಿತು.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...