ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ನಿನ್ನೆಯೇ ಕರ್ನಾಟಕ ಭವನ-೧ ಉದ್ಘಾಟನೆಗೆಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಕಳೆದವಾರ ಸಿಎಂ ಆರೋಗ್ಯ ವಿಚಾರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸೂಚಿಸಿದ್ದರಂತೆ. ಹೀಗಾಗಿ ರಾಹುಲ್ ಗಾಂಧಿ ಭೇಟಿ ಬಳಿಕ ಇದೀಗ ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆ ಇದೆ. ಜತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.