ಬೆಂಗಳೂರು:- ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.
ಪ್ರಶಾಂತ್ ಮೃತ ದುರ್ದೈವಿ. ಪ್ರಶಾಂತ ಕಳೆದ ಎರಡು ವರ್ಷಗಳಿಂದ ಪತ್ನಿಯಿಂದ ದೂರ ಇದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಮೂರು ತಿಂಗಳ ಹಿಂದೆ ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಚೇದನ ಕೊರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಶಾಂತ್ ಒಂಟಿಯಾಗಿ ಇರುತಿದ್ದರು ಎಂದು ತಿಳಿದುಬಂದಿದೆ. ಇಂದು (ಏ.07) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪ್ರಶಾಂತ್ ಲೆನೋವೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.