ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ: ಆರ್.ಅಶೋಕ್ ಆರೋಪ

Date:

ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ: ಆರ್.ಅಶೋಕ್ ಆರೋಪ

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ರಾಜೀನಾಮೆ ನೀಡದೇ ಇರಲು ಕಮಿಷನ್ ವಸೂಲಿ ಮಾಡುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಷನ್ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್ ಸೆಂಟರ್ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.
ಇನ್ನೂ ಬಾಬಾ ಸಾಹೇಬ್ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...