No menu items!
20.4 C
Munich
Tuesday, May 5, 2026

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ – ಸಚಿವ ಎಂ.ಸಿ ಸುಧಾಕರ್

Must read

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ – ಸಚಿವ ಎಂ.ಸಿ ಸುಧಾಕರ್

ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ, ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೇ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಬೀದರ್‌ನಲ್ಲಿಈ ರೀತಿ ಘಟನೆ ಆಗಿದೆ ಎಂದು ಬೆಳಗ್ಗೆ ನಮ್ಮ ಸ್ನೇಹಿತರು ಹೇಳಿದರು. ಇದರಲ್ಲಿ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಇರುತ್ತದೆ. ಕೆಇಎಯಿಂದ ಜನಿವಾರ ತೆಗೆಸಿ ಬರೆಸುವಂತಹ ನಿಯಮ ಇಲ್ಲ ಎಂದರು.
ಶಿವಮೊಗ್ಗ ಎಡಿಸಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಸತ್ಯಾಸತ್ಯತೆ ತಿಳಿಯುತ್ತೇನೆ. ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ. ಆ ರೀತಿ ಜನಿವಾರ ತೆಗೆಸಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಇದರ ವರದಿಯನ್ನು ನಾನು ತರಿಸಿಕೊಳ್ಳುತ್ತೇನೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article