ಹಣ ಅಕ್ರಮ ವರ್ಗಾವಣೆ ಕೇಸ್‌: ಟಾಲಿವುಡ್‌ ಖ್ಯಾತ ನಟ ಮಹೇಶ್‌ ಬಾಬುಗೆ ಇ.ಡಿ. ನೋಟಿಸ್‌..!

Date:

ಹಣ ಅಕ್ರಮ ವರ್ಗಾವಣೆ ಕೇಸ್‌: ಟಾಲಿವುಡ್‌ ಖ್ಯಾತ ನಟ ಮಹೇಶ್‌ ಬಾಬುಗೆ ಇ.ಡಿ. ನೋಟಿಸ್‌..!

ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮಹೇಶ್‌ ಬಾಬುಗೆ ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು.
ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.
ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ. ಮಹೇಶ್ ಬಾಬು ಅವರು ಇದರ ಪ್ರಚಾರ ಮಾಡಿದ್ದರಿಂದ ಅನೇಕರು ಇದರಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿರುವ ಸಾಧ್ಯತೆ ಇರುತ್ತದೆ. ಸದ್ಯ ಮಹೇಶ್ ಬಾಬು ಅವರ ಶಾಮೀಲು ನೇರವಾಗಿ ಇಲ್ಲದೆ ಇದ್ದರು, ಅವರು ಪಡೆದ ಜಾಹೀರಾತಿನ ಹಣದ ಬಗ್ಗೆ ತನಿಖೆ ನಡೆಯಲಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...