ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.!
ಕಲಬುರಗಿ: ರಸ್ತೆ ಬಂದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಬಳಿ ನಡದಿದೆ. ಮಹೇಶ್ (32), ಪ್ರೇಮ್ಕುಮಾರ್ (25), ಅನ್ನದಾನಯ್ಯ (25) ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಘಟನೆಯಲ್ಲಿ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಕೊಡಲು ಕಾರಿನಲ್ಲಿ ಸೇಡಂ ಕಡೆಯಿಂದ ಗುಂಡಗುರ್ತಿ ಕಡೆಗೆ ಹೊರಟಿರುವಾಗ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.